“ಸಹಕಾರ ಮಾಣಿಕ್ಯ”
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ
3ನೇ ತ್ರೈಮಾಸಿಕ 31.12.2025 ಕ್ಕೆ ಉತ್ತಮ ಪ್ರಗತಿ
ರೂ.1200 ಕೋಟಿ ವ್ಯವಹಾರ (ಠೇವಣಾತಿ + ಹೊರಬಾಕಿ ಸಾಲ)

ರಾಜ್ಯದ ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರ ಮಾಣಿಕ್ಯ ಪ್ರಶಸ್ತಿ ವಿಜೇತ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2025-26ನೇ ಸಾಲಿನ ವಿತ್ತೀಯ ವರ್ಷದ 3ನೇ ತ್ರೈಮಾಸಿಕ ಅವಧಿ ದಿನಾಂಕ 31.12.2025ಕ್ಕೆ ರೂ.660 ಕೋಟಿ ಠೇವಣಿ, ರೂ.558 ಕೋಟಿ ಸಾಲ, ರೂ.1218 ಕೋಟಿ (ಠೇವಣಿ ಮತ್ತು ಸಾಲ) ವ್ಯವಹಾರವನ್ನು ಹೊಂದಿದೆ. 2024ನೇ ಡಿಸೆಂಬರ್ 31ಕ್ಕೆ ಹೋಲಿಸುವಾಗ ಠೇವಣಾತಿಯಲ್ಲಿ ರೂ.96 ಕೋಟಿ 17% ವೃದ್ಧಿ, ಹೊರಬಾಕಿ ಸಾಲದಲ್ಲಿ ರೂ.72 ಕೋಟಿ ಹೆಚ್ಚಳ 15% ವೃದ್ಧಿಯೊಂದಿಗೆ, ಒಟ್ಟು ವ್ಯವಹಾರದಲ್ಲಿ ರೂ.168 ಕೋಟಿ ವೃದ್ಧಿಯಿಂದ 16% ಹೆಚ್ಚಳವನ್ನು ಸಾಧಿಸಿದೆ.
31.12.2025ಕ್ಕೆ ನಿವ್ವಳ ಲಾಭವು ರೂ.10.22 ಕೋಟಿ ದಾಖಲಿಸಿದ್ದು, ಇದು ಕಳೆದ ವರ್ಷಕ್ಕಿಂತ ರೂ. 1.39 ಕೋಟಿ ಹೆಚ್ಚಳವಾಗಿ 16% ವೃದ್ಧಿಯಾಗಿರುತ್ತದೆ. ಸ್ಥಾಪನೆಯಾದನಿಂದ ನಿರಂತರ ಡಿವಿಡೆಂಡನ್ನು ನೀಡುತ್ತಾ ಬಂದ ಸೊಸೈಟಿ, 2024-25ನೇ ಸಾಲಿಗೆ ಶೇ.25 ಡಿವಿಡೆಂಡನ್ನು ನೀಡಿದ್ದು, ಕಳೆದ ಏಳು ವರ್ಷಗಳಿಂದ ಗರಿಷ್ಟ 25% ಡಿವಿಡೆಂಡನ್ನು ನೀಡುತ್ತಿದೆ.
ಸಂಘದ ನಿವ್ವಳ ಅನುತ್ಪಾದಕ ಆಸ್ತಿಯು ಕಳೆದ 18 ವರ್ಷಗಳಿಂದ ಶೂನ್ಯ ಪ್ರಮಾಣದಲ್ಲಿದ್ದು, ಸಾಲ ಮರುಪಾವತಿಯು ಉತ್ತಮವಾಗಿರುತ್ತದೆ.
30.03.2026ಕ್ಕೆ ಒಟ್ಟು ವ್ಯವಹಾರದ ಗುರಿ ರೂ.1300 ಕೋಟಿಯಾಗಿದ್ದು, ಅದನ್ನು ತಲುಪಲು ಸರ್ವ ಪ್ರಯತ್ನ ಮಾಡಲಾಗಿದೆ ಹಾಗೂ ಸಂಘದ ನಿರಂತರ ಪ್ರಗತಿಗೆ ಸಹಕರಿಸುತ್ತಿರುವ ಸಂಘದ ಎಲ್ಲಾ ಆಡಳಿತ ಮಂಡಳಿ ಸದಸ್ಯರುಗಳಿಗೆ, ಶಾಖಾ ಸಲಹಾ ಸಮಿತಿ ಅಧ್ಯಕ್ಷರುಗಳಿಗೆ ಹಾಗೂ ಸದಸ್ಯರುಗಳಿಗೆ, ಸಂಘದ ಸರ್ವ ಸದಸ್ಯ ಬಾಂಧವರಿಗೆ ಮತ್ತು ಹಿತೈಷಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಂಘದ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.